G.S. ಶಿವರುದ್ರಪ್ಪನವರ ಒಂದು ಕವಿತೆ...ನನಗೆ ಬಹಳ ಹಿಡಿಸಿದ್ದು
ಹಣತೆ ಹಚ್ಚುತ್ತೇನೆ ನಾನೂ
ಈ ಕತ್ತಲನ್ನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ
ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆ
ಇದರಲ್ಲಿ ಮುಳುಗಿರುವಾಗ
ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ...
ಹಣತೆ ಹಚ್ಚುತ್ತೇನೆ
ಕತ್ತಲೆಯನ್ನು ದಾಟುತ್ತೇನೆಂಬ ಭ್ರಮೆಯಿಂದಲ್ಲ
ಇರುವಷ್ಟು ಹೊತ್ತು ನನ್ನ ಮುಖ ನೀನು
ನಿನ್ನ ಮುಖ ನಾನು
ನೋಡಬಹುದೆಂಬ ಒಂದೇ ಒಂದು ಆಸೆಯಿಂದ
Subscribe to:
Posts (Atom)